ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.
ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲಾಗುವುದು.
ಪ್ರತಿ ಗ್ರಾಮಪಂಚಾಯಿತಿಗೆ 2 ರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪ್ರತಿ ಗುಂಪಿಗೆ 10 ಸಾವಿರ ನಿಧಿ, 1 ಲಕ್ಷ ರೂ. ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲಸೌಲಭ್ಯ ಒದಗಿಸಲಾಗುತ್ತದೆ.
ಸ್ಥಳೀಯ ಬೇಡಿಕೆಗಳನ್ನು ಆಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಉದ್ದೇಶಿಸಿದೆ.5 ಮತ್ತು 8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ಮುಂದೂಡಿಕೆ