ಮೈಸೂರು : ‘ನಂಜನಗೂಡು’ ಕ್ಷೇತ್ರದ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ’ ಎಂದು ಕಾಂಗ್ರೆಸ್ ನಾಯಕ ಹೆಚ್. ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.
ನಂಜನಗೂಡು ಕ್ಷೇತ್ರದಿಂದ ಆಯ್ಕೆ ಬಯಸಿ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮತ್ತು ಮಾಜಿ ಸಂಸದ ಆರ್.ಧ್ರುವನಾರಾಯಣ್ ಅರ್ಜಿ ಸಲ್ಲಿಸಿದ್ದರು.
ಆದರೆ ಧ್ರುವನಾರಾಯಣ್ ವಿಧಿವಶರಾದ ಹಿನ್ನೆಲೆ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆ ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ’ ಎಂದು ಕಾಂಗ್ರೆಸ್ ನಾಯಕ ಹೆಚ್. ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.ಇದನ್ನು ಓದಿ –ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ದಶಪಥ ಅಲ್ಲ : ಯೋಜನಾ ನಿರ್ದೇಶಕ ಶ್ರೀಧರ್