ರಾಮನಗರದಲ್ಲಿ ಮಾರ್ಚ್ 19 ರಂದು ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ಮಾಡಲಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಮತದಾರರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕೆಲವು ಮಹತ್ವದ ಘೋಷಣೆಗಳನ್ನು ಸರ್ಕಾರ ಮಾಡಿತ್ತು.
ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟಿರುವ ಬಿಜೆಪಿ ಸರ್ಕಾರ ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ತೀರ್ಮಾನಿಸಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯಲ್ಲೇ ಕರ್ನಾಟಕದಲ್ಲೂ ಮಂದಿರ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.
ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಭಾರತದ ಅಯೋಧ್ಯೆಯಾಗಿ ಅಭಿವೃದ್ಧಿಪಡಿಸಿ ಅದನ್ನು ಪಾರಂಪರಿಕ ಪ್ರವಾಸಿ ಕ್ಷೇತ್ರವಾಗಿ ಮಾಡಬೇಕು. ರಾಮದೇವರ ಬೆಟ್ಟದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವ 19 ಎಕರೆ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಬೇಕೆಂದು ಎಂದು ಸಚಿವ ಅಶ್ವತ್ಥ ನಾರಾಯಣ ಒತ್ತಾಯಿಸಿದ್ದರು.ಇದನ್ನು ಓದಿ –ಪ್ರತಿಭಟನೆಗೆ ಇಳಿದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಪೋಲಿಸರ ವಶಕ್ಕೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ