ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ನಿವಾಸದಿಂದ ಚಿನ್ನಾಭರಣ ಕಳವು ಮಾಡಲಾಗಿದೆ, ಈ ಕುರಿತಂತೆ ಚೆನ್ನೈನ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ದೂರಿನಲ್ಲಿ ಫೆಬ್ರವರಿ 27 ರಂದು ಐಶ್ವರ್ಯ, “ನನ್ನ ಲಾಕರ್ನಲ್ಲಿದ್ದ ಹಲವಾರು ಬೆಲೆಬಾಳುವ ಆಭರಣಗಳನ್ನು ಕಳವು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ತನ್ನ ಮನೆಯಲ್ಲಿನ ಮೂವರು ಸಿಬ್ಬಂದಿ, ಓರ್ವ ಚಾಲಕ ಮತ್ತು ಇಬ್ಬರು ಮನೆಗೆಲಸದವರ ಪೈಕಿ ಯಾರೋ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ಐಶ್ವರ್ಯಾ ಹೇಳಿದ್ದಾರೆ. ರಾಜ್ಯ ರಾಜಕಾರಣಕ್ಕೆ ರಮ್ಯಾ ಎಂಟ್ರಿ : ಚನ್ನಪಟ್ಟಣ /ಪದ್ಮನಾಭ ನಗರದಿಂದ ಕಣಕ್ಕಿಳಿಸಲು ಚಿಂತನೆ
2019 ರಲ್ಲಿ ನಡೆದ ತನ್ನ ತಂಗಿಯ ಮದುವೆಯಲ್ಲಿ ಆಭರಣಗಳನ್ನು ಬಳಸಿದ ನಂತರ ಆಭರಣಗಳನ್ನು ತನ್ನ ಲಾಕರ್ನಲ್ಲಿ ಇರಿಸಿದ್ದೆ . ಲಾಕರ್ ಕೀಗಳನ್ನು ಸೇಂಟ್ ಮೇರಿಸ್ ರೋಡ್ ಅಪಾರ್ಟ್ಮೆಂಟ್ನಲ್ಲಿರುವ ತನ್ನ ವೈಯಕ್ತಿಕ ಸ್ಟೀಲ್ ಕಬೋರ್ಡ್ನಲ್ಲಿ ಇರಿಸಲಾಗಿತ್ತು. ಇದು ತನ್ನ ಸಿಬ್ಬಂದಿಗೆ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಫೆ.10ರಂದು ಲಾಕರ್ ತೆರೆದಾಗ ನನ್ನ ಬಳಿ ಇದ್ದ ಬೆಲೆಬಾಳುವ ಚಿನ್ನಾಭರಣಗಳಲ್ಲಿ ಕೆಲ ಆಭರಣಗಳು ನಾಪತ್ತೆಯಾಗಿದ್ದು, ಇಂದಿನವರೆಗೂ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ನನ್ನ ಮದುವೆಯ ನಂತರ ಕಳೆದ 18 ವರ್ಷಗಳಲ್ಲಿ ಎಲ್ಲಾ ಬೆಲೆಬಾಳುವ ಆಭರಣಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕದ್ದ ಆಭರಣಗಳಲ್ಲಿ ಡೈಮಂಡ್ ಸೆಟ್ಗಳು, ಆಂಟಿಕ್ ಗೋಲ್ಡ್ ಪೀಸ್, ನವರತ್ನದ ಸೆಟ್ಗಳು, ಚಿನ್ನದ ಸೆಟ್, ಕಿವಿಯೋಲೆಗಳು, ಆರಂ, ನೆಕ್ಲೇಸ್, ಬಳೆಗಳು ಸೇರಿವೆ. ಚಿನ್ನಾಭರಣಗಳ ಅಂದಾಜು ಒಟ್ಟು ಮೌಲ್ಯ 3,60,000 ರೂಪಾಯಿ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್