ಭ್ರಷ್ಟಾಚಾರ ಆರೋಪ ಪಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಜನಪ್ರತಿನಿಧಿಗಳ ನ್ಯಾಯಾಧೀಶ ಜಯಂತ್ ಕುಮಾರ್, ಶಾಸಕರನ್ನು ಐದು ದಿನಗಳವರೆಗೆ ಲೋಕಾಯುಕ್ತ ಪೊಲೀಸರಿಗೆ ನೀಡಿ ಆದೇಶ ನೀಡಿದ್ದಾರೆ.
ಲೋಕಾಯುಕ್ತ ಎಸ್ಪಿ ಅಶೋಕ್ ಸಮ್ಮುಖದಲ್ಲಿ ವಿರೂಪಾಕ್ಷಪ್ಪ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಯಿತು.
ಈ ವೇಳೆ ಲೋಕಾಯುಕ್ತ ಪರ ವಕೀಲ ಸಂತೋಷ್ ಹತ್ತು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಇದೇ ವೇಳೆ ಮಾಡಾಳು ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದರು.
ಪುತ್ರನ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಮಾಡಾಳು ಅವರನ್ನು ನಿನ್ನೆ ರಾತ್ರಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
ಇಂದು ಬಂಧನದ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮಧ್ಯಾಹ್ನದ ವೇಳೆ ಶಾಸಕರನ್ನು ಜನಪ್ರತಿನಿಧಿಗಳ ಕೋರ್ಟ್ಗೆ ಹಾಜರುಪಡಿಸಿದ್ದರು.ಇದನ್ನು ಓದಿ –ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ