ಬೆಂಗಳೂರಿನಲ್ಲಿ ಅಗ್ನಿ ದುರಂತ – 8 ಮಂದಿ ದಹನ

Team Newsnap
1 Min Read
Fire tragedy in Bangalore - 8 people burned ಬೆಂಗಳೂರಿನಲ್ಲಿ ಅಗ್ನಿ ದುರಂತ - 8 ಮಂದಿ ದಹನ

ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು.

ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ ಅನ್ಸಾರಿ, ಅಮಿತ್ ಕುಮಾರ್ ಸಾವನ್ನಪ್ಪಿದ್ದಾರೆ.

ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತಕ್ಕೆ ಒಳಗಾದ 8 ಮಂದಿ ಗಾಯಗೊಂಡಿದ್ದರು, ಗಾಯಗೊಂಡ ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 8 ಮಂದಿ ಸಾವನ್ನಪ್ಪಿದ್ದಾರೆ.

ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇದನ್ನು ಓದಿ –ಸರ್ಕಾರದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಕೆಇಎ 757 ಹುದ್ದೆಗಳಿಗೆ ಅರ್ಜಿ ಆಹ್ವಾನ

Share This Article
Leave a comment