ಮುಂದಿನ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಮತ್ತೆ ಮತ್ತೆ ರಾಜ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಏ 8, 9ರಂದು ಮತ್ತೆ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಮೋದಿ ಕಾರ್ಯಕ್ರಮದ ವಿವರ ಹೇಗಿದೆ :
ಮೈಸೂರಿನಲ್ಲಿ ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಏಪ್ರಿಲ್ 8ರ ರಾತ್ರಿ 8ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ .
ಮೋದಿಯವರು ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದಾರೆ .
ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೈಸೂರುಜಿಲ್ಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸುವ ಮೂಲಕ ಹೆಚ್ಚಿನ ಭದ್ರತೆಯನ್ನು ವಹಿಸಲಿದೆ.ಇದನ್ನು ಓದಿ –ಚುನಾವಣೆ ಎಫೆಕ್ಟ್ : ಮೇ 10, 13ಕ್ಕೆ ನಿಗದಿಯಾದ ಮದುವೆ, ಶುಭ ಸಮಾರಂಭಗಳೂ ರದ್ದು
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ