ಕುಮಾರಸ್ವಾಮಿ ಜೊತೆ ಮುನಿಸಿಕೊಂಡು ಕಾಂಗ್ರೆಸ್ ಸೇರಿ ಟಿಕೆಟ್ ವಂಚಿತರಾದ ವೈಎಸ್ ವಿ ದತ್ತ ಅವರಿಗೆ ಕಡೂರಿನಿಂದಲೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಘೋಷಿಸಿದರು.
ದತ್ತ ನಾಮಪತ್ರ ಸಲ್ಲಿಕೆ ದಿನ ದೇವೇಗೌಡರು ಕಡೂರಿಗೆ ಆಗಮಿಸಿ ಆಶೀರ್ವಾದ ಮಾಡಲಿದ್ದಾರೆ ಎಂದು ರೇವಣ್ಣಹೇಳಿದರು.
ದತ್ತರ ನಿವಾಸಕ್ಕೆ ಇಂದು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಜೆಡಿಎಸ್ ಗೆ ರೆಬಲ್ ಆಗಿದ್ದ ದತ್ತ ಮನಸ್ಥಿತಿ ಬದಲಿಸಿದರು.
ನಿನ್ನೆ ಸ್ವತಃ ದೇವೇಗೌಡರೇ ದತ್ತ ಜೊತೆ ದೂರವಾಣಿಯಲ್ಲಿ ಮಾತನಾಡಿ ಜೆಡಿಎಸ್ ಮರಳುವಂತೆ ಸೂಚನೆ ನೀಡಿದ್ದ ಬೆನ್ನಲ್ಲೇ ದತ್ತ ಜೆಡಿಎಸ್ ಗೆ ವಾಪಸ್ಸಾಗಿದ್ದಾರೆ.
ಹಾಸನ ಟಿಕೆಟ್ ಅನ್ನು ಕುಮಾರಸ್ವಾಮಿ ಸಾಮಾನ್ಯ ಕಾರ್ಯ ಕರ್ತನಿಗೆ ನೀಡುವ ಬಯಕೆಗೆ, ದತ್ತ ಜೆಡಿಎಸ್ ಪುನರಾಗಮನವು ಸರಳ ದಾರಿ ಮಾಡಿಕೊಟ್ಟಂತಾಯಿತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ