ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದರು.
ಈಶ್ವರಪ್ಪನವರ ರಾಜಕೀಯ ನಡೆ ಬಗ್ಗೆ ಪ್ರಶಂಸೆ ಮಾಡಿದ್ದಾರೆ ಎನ್ನಲಾಗಿದೆ.ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದರು.
ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು. ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ,ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಸ್ ಎ ರವೀಂದ್ರ ನಾಥ್ ನಿವೃತ್ತಿ ಪ್ರಕಟ
ಈಶ್ವರಪ್ಪ ಅವರ ಪಕ್ಷ ನಿಷ್ಠೆ
ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಪಕ್ಷ ಸೂಚಿಸುತ್ತಿದ್ದಂತೆ ಯಾವುದೇ ಮರು ಮಾತಾಡದೇ ಪಕ್ಷದ ಆದೇಶವನ್ನು ಪಾಲನೆ ಮಾಡಿದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಇನ್ನು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದರು. ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ