ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಭಾನುವಾರ ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ಜರುಗಿತು.
ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ.
ಸಿದ್ಧಗಂಗೆಯ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಸವಜಯಂತಿ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಸಲಾಗಿದೆ.
ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠ ಹಾಗೂ ದೇವನಹಳ್ಳಿ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೂ ಸಭಾ ಕಾರ್ಯಕ್ರಮದಲ್ಲಿ ಅಭಿದಾನವನ್ನು ಘೋಷಣೆ ಮಾಡಲಾಗಿದೆ.
ಬಂಡೆ ಮಠದ ಉತ್ತರಾಧಿಕಾರಿಗಳಿಗೆ ಶ್ರೀ ಮಹಾಲಿಂಗ ಸ್ವಾಮೀಜಿ, ದೇವನಹಳ್ಳಿಯ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸದಾಶಿವ ಸ್ವಾಮೀಜಿ ಎಂಬ ಅಭಿದಾನ ನೀಡಲಾಗಿದೆ.ಇದನ್ನು ಓದಿ –ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ
ಸಿದ್ಧಗಂಗೆಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಿರಾಭಾರಿ ನಿರಂಜನ ಜಂಗಮಪಟ್ಟಾಧಿಕಾರ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು