ಮೈಸೂರು ಜಿಲ್ಲಾಧಿbಕಾರಿ ರೋಹಿಣಿ ಸಿಂಧೂರಿ ನೇಮಕ ವಿರೋಧಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಿಎಟಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ
ಇತ್ಯರ್ಥ ನಾಳೆಯೇ ಆಗುವ ಸಾಧ್ಯತೆ ಇದೆ.
ಈಗಾಗಲೇ ಅರ್ಜಿ ವಿಚಾರಣೆ
ಮಾಡಿರುವ ನ್ಯಾಯಾಲಯದ ನಾಳೆಯೇ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ 29 ದಿನಗಳಲ್ಲೇ, ಅವರನ್ನು ವರ್ಗಮಾಡಿ ಆ ಜಾಗಕ್ಕೆ ರೋಹಿಣಿಯವರನ್ನು ಸರ್ಕಾರ ತಂದು ಕೂರಿಸಿತ್ತು. ಸರ್ಕಾರದ ನಡೆಯನ್ನು ವಿರೋಧಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಶರತ್ ಸಿಎಟಿ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಅರ್ಜಿಯ ವಿಚಾರಣೆ ಪದೇ ಪದೇ ಮುಂದಕ್ಕೆ ಹೋಗುತ್ತಲೇ ಇತ್ತು.
ಹಲವು ದಿನಗಳಿಂದ ವಿಚಾರಣೆ ನಡೆಸಿರುವ ಸಿಎಟಿ ನ್ಯಾಯಾಲಯ ನಾಳೆ ನೀಡಲಿರುವ ತೀರ್ಪು ಶರತ್ ಪರವಾದರೆ, ರೋಹಿಣಿಯವರಿಗೆ ಮಾತ್ರವಲ್ಲದೇ ಸರ್ಕಾರಕ್ಕೂ ಸಹ ತೀವ್ರ ತರಹದ ಸಂಕಷ್ಟವನ್ನು ತಂದೊಡ್ಡಲಿದೆ.
ಕೆಲ ದಿನಗಳ ಹಿಂದೆ ಶರತ್ ತಮಗೆ ನ್ಯಾಯ ಸಿಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆಸ್ಪತ್ರೆಯನ್ನೂ ಸೇರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ