ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷದ ಭ್ರಷ್ಟಾಚಾರದ ರೇಡ್ ಕಾರ್ಡ್ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಿ ರೇಟ್ ಕಾರ್ಡ್ ಆರೋಪದ ಬಗ್ಗೆ ಪುರಾವೆ ಸಲ್ಲಿಸುವಂತೆ ಸೂಚಿಸಿದೆ.
ನೋಟಿಸ್ ನಲ್ಲಿ, ನೇಮಕಾತಿಗಳು ಮತ್ತು ವರ್ಗಾವಣೆಗಳು, ಉದ್ಯೋಗಗಳು ಮತ್ತು ಆಯೋಗಗಳ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ದರಗಳ ಪ್ರಾಯೋಗಿಕ ಪುರಾವೆಗಳನ್ನು ಒದಗಿಸಲು ಕಾಂಗ್ರೆಸ್ ಗೆ ಮೇ 7 ರಂದು ಸಂಜೆ 7 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.ಇದನ್ನು ಓದಿ –ಬೆಂಗಳೂರು , ಮೈಸೂರಿನ ಫೈನಾನ್ಸಿಯರ್ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ– 20 ಕೋಟಿ ಹಣ ವಶ
ನಾಳೆ ಸಂಜೆ 7 ಗಂಟೆಗೆ ಕೆಪಿಸಿಸಿಯಿಂದ ಚುನಾವಣಾ ಆಯೋಗ ಮುಂದೆ ಹಾಜರಾಗಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದಂತ ರೇಟ್ ಕಾರ್ಡ್ ಬಗ್ಗೆ ದಾಖಲೆ ಸಲ್ಲಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.