ಬೆಂಗಳೂರು : ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋದಕ್ಕೆ ಆಗಲ್ಲ ಎಂದು ನೂತನ ಡಿಸಿಎಂ ಡಿಕೆಶಿ ಬೆಂಗಳೂರಿನಲ್ಲಿ ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನೂತನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅದೆಲ್ಲದಕ್ಕೂ ವರದಿಗಳನ್ನು ಪಡೆಯಬೇಕಾಗುತ್ತೆ ಎಂದರು.
ಯಾರಿಗೆ ಹಣ ಕೊಡಬೇಕು? ಯಾರಿಗೆ ವಿದ್ಯುತ್ ಕೊಡಬೇಕು? ಫಲಾನುಭವಿಗಳು ಯಾರು ಎಂಬುದನ್ನೆಲ್ಲಾ ವರದಿ ಪಡೆದು ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.
ನೂತನ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. 5 ವರ್ಷಗಳಲ್ಲಿ ಈಡೇರಿಸುವಂತಹದ್ದು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳ ಜಾರಿ ಬಗ್ಗೆ ಮಾತು ಕೊಟ್ಟಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ನಿರ್ಧಾರ ಮಾಡಿದ್ದು, ಮುಂದಿನ ಸಂಪುಟ ಸಭೆಯ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.ಮೇ 22 ರಿಂದ ಮೂರು ದಿನ ಅಧಿವೇಶನ : ಆರ್ ವಿ ದೇಶಪಾಂಡೆ ಹಂಗಾಮಿ ಸ್ಪೀಕರ್ – ಸಿಎಂ
2013-2018 ರಲ್ಲಿ 158 ಭರವಸೆ ಈಡೇರಿಸಿದ್ವಿ, ಅದರ ಜೊತೆಗೆ 30 ಕಾರ್ಯಕ್ರಮಗಳನ್ನು ಹೊಸದಾಗಿ ಜಾರಿ ಮಾಡಿದ್ವಿ. ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನ ಹೊಸದಾಗಿ ಜಾರಿಗೊಳಿಸಿದ್ವಿ. ಜನರಿಗೆ ನಮ್ಮ ಮೇಲೆ ವಿಶ್ವಾಸ ಇದೆ. ನಾವು ಕೊಟ್ಡ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು