ಬೆಂಗಳೂರು: ವಿಧಾನಸಭಾ ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರ ಜತೆ ಡಿಕೆಶಿ ಫ್ರೆಂಡ್ಶಿಪ್ ಮಾಡಿದ್ದಾರೆ.
ಅಧಿವೇಶನ ನಡೆಯುವ ಮೊದಲು ವಿಪಕ್ಷದ ಮೊಗಸಾಲೆಗೆ ಬಂದ ಡಿಕೆಶಿ ಬಿಜೆಪಿ ಸದಸ್ಯರಿಗೆ ಶುಭ ಕೋರಿದ್ದಾರೆ.
ಈ ವೇಳೆ ಬೊಮ್ಮಾಯಿ, ಯತ್ನಾಳ್, ಮುನಿರತ್ನ, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರಿಗೆ ಡಿಕೆಶಿ ಹ್ಯಾಂಡ್ಶೇಕ್ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ವಿಪಕ್ಷ ಸದಸ್ಯರ ಜತೆ ಜತೆಗೆ ನಿಂತು ಫೋಟೋಗೆ ಡಿಕೆಶಿ ಪೋಸ್ ಕೊಟ್ಟಿದ್ದಾರೆ.
16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ ನಡೆಸಲಾಗುತ್ತಿದೆ.
ಹಂಗಾಮಿ ಸಭಾಧ್ಯಕ್ಷ ಆರ್ವಿ ದೇಶಪಾಂಡೆ ಚುನಾವಣೆಯಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ 224 ಮಂದಿ ಶಾಸಕರು ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದನ್ನು ಓದಿ – ಮತದಾರರಿಗೆ ಹಣ ಹಂಚದಿದ್ರೆ ನನಗೆ ವಾಪಸ್ ಕೊಡಿ: ನಾರಾಯಣಗೌಡ
15ನೇ ವಿಧಾನಸಭೆ ಅವಧಿ ಮೇ 23ಕ್ಕೆ ಅಂತ್ಯಗೊಳ್ಳಲ್ಲಿದ್ದು, ಅಷ್ಟರೊಳಗೆ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು