6 ನೇ ಬಾರಿಗೆ ಬಿ.ಶರತ್ ರವರ ಸಿಎಟಿ ಅರ್ಜಿ ವಿಚಾರಣೆ: ಡಿ.ಸಿ ರೋಹಿಣಿಗೆ ರಿಲೀಫ್

Team Newsnap
1 Min Read

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮತ್ತೆ ಸಿಎಟಿ ನವೆಂಬರ್ 23 ಕ್ಕೆ ಮುಂದೂಡಿದೆ.

ಇಂದು ವಿಚಾರಣೆ ನಡೆಸಿದ ಸಿಎಟಿ ವಾದ ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ನವೆಂಬರ್ 23 ಕ್ಕೆ ಮುಂದೂಡಿದೆ. ಡಿ.ಸಿ ರೋಹಿಣಿ ಸಿಂಧೂರಿಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

ಅವಧಿಗೂ ಮುನ್ನವೇ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಈ ಹಿಂದೆ ಅಕ್ಟೋಬರ್ 23, ನವೆಂಬರ್ 3 ಹಾಗೂ 10 ಕ್ಕೆ ಮುಂದೂಡಿತ್ತು.

ಅರ್ಜಿದಾರರ ಪರ ವಕೀಲ, ಎ.ಎಸ್.ಪೊನ್ನಣ್ಣ ವಾದ ಮಂಡನೆ ಬಳಿಕ ಪ್ರತಿವಾದ ಮಂಡಿಸಲು ಎಜಿ ಮತ್ತೆ ಕಾಲಾವಕಾಶ ಕೋರಿದರು .ಈ ಹಿನ್ನೆಲೆ ಸಿಎಟಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿತ್ತು. ಮತ್ತೆ ಮರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನವೆಂಬರ್ 3 ಕ್ಕೆ ಮುಂದೂಡಿಕೆಯಾಗಿತ್ತು. ಮತ್ತೆ ಮರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನವೆಂಬರ್ 10 ಕ್ಕೆ ಮುಂದೂಡಿತ್ತು. ಇದೀಗ ಆರನೇ ಬಾರಿಗೆ ನವೆಂಬರ್ 23 ಕ್ಕೆ ಮತ್ತೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

Share This Article
Leave a comment