ಚನ್ನರಾಯಪಟ್ಟಣ ತಾಲೂಕು ತಗಡೂರು ಗ್ರಾಮದ ಶ್ರೀಮತಿ ದೇವೀರಮ್ಮ (ಗೌಡರ ಮನೆ ಶಿವರುದ್ರಪ್ಪ ಪತ್ನಿ) ಅವರು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷವಾಗಿತ್ತು.
ಮಕ್ಕಳಾದ ಇಂಜಿನಿಯರ್ ಟಿ.ಎಸ್.ಶಿವಕುಮಾರಸ್ವಾಮಿ, ಟಿ.ಎಸ್.ಮೃತ್ಯುಂಜಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಟಿ.ಎಸ್.ಸುವರ್ಣಮ್ಮ, ಟಿ.ಎಸ್.ತೋಂಟಾರಾಧ್ಯ ಹಾಗೂ ಟಿ.ಎಸ್.ಇಂದ್ರಾಣಿ ಸೇರಿದಂತೆ ಮೊಮ್ಮಕ್ಕಳು, ಮರಿಮಕ್ಕಳು, ಸೊಸೆಯಂದಿರು ಮತ್ತು ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ದೇವೀರಮ್ಮ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಚಿಕ್ಕಮ್ಮ.
ದೇವೀರಮ್ಮ ಅವರ ಅಂತ್ಯಕ್ರಿಯೆ ತಗಡೂರಿನಲ್ಲಿ ಶುಕ್ರವಾರ ಮದ್ಯಾಹ್ನ 12 ಗಂಟೆಗೆ ನಡೆಯಲಿದೆ.
ಸಂತಾಪ:
ಶ್ರೀಮತಿ ದೇವೀರಮ್ಮ ಅವರ ನಿಧನಕ್ಕೆ ಶಾಸಕರಾದ ಸಿ.ಎನ್.ಬಾಲಕೃಷ್ಣ ಅವರು ಸೇರಿದಂತೆ ಹಲವು ಗಣ್ಯರು, ಗ್ರಾಮ ಪಂಚಾಯಿತಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ