ಬೆಂಗಳೂರು:
ದೆಹಲಿಯಲ್ಲಿ ಸಂಪುಟ ಕಸರತ್ತು ನಡೆಯುತ್ತಿರುವಾಗಲೇ ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.
ದೆಹಲಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೊತೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ.
ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ನನಗೆ ಬೇಕು ಡಿಕೆಶಿ ಹೇಳಿದ್ದರೆ , ಬೆಂಬಲಿಗ ಶಾಸಕರಿಗೆ ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ಕೇಳಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಪಟ್ಟ ಕೇಳಿದಾಗ ಹೈಕಮಾಂಡ್ ನಿರಾಕರಿಸಿ ಡಿಸಿಎಂ ಪಟ್ಟ ನೀಡಿತ್ತು. ಒಂದೇ ಡಿಸಿಎಂ ಇರಬೇಕು, ಬೇರೆ ಯಾರಿಗೆ ಡಿಸಿಎಂ ಕೊಡಬಾರದು ಎಂದು ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯಂತೆ ಸಿದ್ದರಾಮಯ್ಯ ಸಂಪುಟದಲ್ಲಿ ಒಂದೇ ಡಿಸಿಎಂ ನೀಡಲಾಗಿದೆ. ಈಗ ಡಿಕೆ ಶಿವಕುಮಾರ್ ಹೊಸ ಬೇಡಿಕೆಯನ್ನು ಇರಿಸಿದ ಹಿನ್ನೆಲೆಯಲ್ಲಿ ಯಾರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ