ಹಾವೇರಿ : ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ 10 ಇಂಚಿನ ಜಿಂಕೆ ಕೊಂಬು ಸೇರಿ 4.75 ಕೋಟಿ ರು ಮೌಲ್ಯದ ಚಿನ್ನಾಭರಣ, ಮನೆ, ಸೈಟು ಸೇರಿ ಇತರ ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ
ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ ಅವರ ನೇತೃತ್ವದಲ್ಲಿ ವಾಗೀಶ ಶೆಟ್ಟರ್ ಅವರ ರಾಣೆಬೆನ್ನೂರಿನ ಬನಶಂಕರಿ ನಗರದಲ್ಲಿರುವ ಮನೆ, ಕಚೇರಿ ಹಾಗೂ ಹಾವೇರಿಯ ಜಿಲ್ಲಾಡಳಿತ ಭವನ ನಿರ್ಮಿತಿ ಕೇಂದ್ರದ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ 10 ಇಂಚಿನ ಜಿಂಕೆ ಕೊಂಬು, ಅರ್ಧ ಕೆ.ಜಿ. ಚಿನ್ನಾಭರಣ, 2 ಕೆ.ಜಿ. ಬೆಳ್ಳಿ ಆಭರಣ, 18.30 ಲಕ್ಷ ರೂ. ನಗದು, ರಾಜ್ಯದ ವಿವಿಧೆಡೆ ಇರುವ 8 ಮನೆ, 16 ಸೈಟು, 65 ಎಕರೆ ಜಮೀನು ಹೊಂದಿರುವ ದಾಖಲೆಗಳು ಸೇರಿ ಅಂದಾಜು 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಜತೆಗೆ ಹಣ ಏಣಿಕೆ ಮಾಡುವ ಯಂತ್ರ ಕೂಡ ವಶಪಡಿಸಿಕೊಳ್ಳಲಾಗಿದೆ.
ವಾಗೀಶ ಶೆಟ್ಟರ್ ಹಾವೇರಿ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ, ರಾಣೆಬೆನ್ನೂರ ತಾಲೂಕಿನಲ್ಲಿಯೆ ಅತಿ ಹೆಚ್ಚು ಸರ್ಕಾರಿ ಶಾಲಾ ಕಟ್ಟಡ, ಹಾಸ್ಟೆಲ್ ಸೇರಿ ಇತರ ಕಾಮಗಾರಿಗಳನ್ನು ಮಾಡುತ್ತಿದ್ದರು. ವಾಗೀಶ ಜತೆ ಆತನ ಸಹೋದರ ಕೂಡ ಸಾಥ್ ನೀಡುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
ರಾಣೆಬೆನ್ನೂರ ಆರ್ಎಫ್ಓ ಕಿರಣಕುಮಾರ್ ಕಲ್ಲಮ್ಮನವರ, ವಾಗೀಶ ಮನೆಯಲ್ಲಿ ದೊರೆತ್ತಿರುವ ಜಿಂಕೆ ಕೊಂಬು ಬಹಳ ವರ್ಷದ ಹಿಂದಿನದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಿದ ಬಳಿಕ ಅದರ ಹಿನ್ನೆಲೆ ತಿಳಿಯಲಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್