ಹಾವೇರಿ : ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ವಾಗೀಶ ಶೆಟ್ಟರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ 10 ಇಂಚಿನ ಜಿಂಕೆ ಕೊಂಬು ಸೇರಿ 4.75 ಕೋಟಿ ರು ಮೌಲ್ಯದ ಚಿನ್ನಾಭರಣ, ಮನೆ, ಸೈಟು ಸೇರಿ ಇತರ ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ
ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ ಅವರ ನೇತೃತ್ವದಲ್ಲಿ ವಾಗೀಶ ಶೆಟ್ಟರ್ ಅವರ ರಾಣೆಬೆನ್ನೂರಿನ ಬನಶಂಕರಿ ನಗರದಲ್ಲಿರುವ ಮನೆ, ಕಚೇರಿ ಹಾಗೂ ಹಾವೇರಿಯ ಜಿಲ್ಲಾಡಳಿತ ಭವನ ನಿರ್ಮಿತಿ ಕೇಂದ್ರದ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ 10 ಇಂಚಿನ ಜಿಂಕೆ ಕೊಂಬು, ಅರ್ಧ ಕೆ.ಜಿ. ಚಿನ್ನಾಭರಣ, 2 ಕೆ.ಜಿ. ಬೆಳ್ಳಿ ಆಭರಣ, 18.30 ಲಕ್ಷ ರೂ. ನಗದು, ರಾಜ್ಯದ ವಿವಿಧೆಡೆ ಇರುವ 8 ಮನೆ, 16 ಸೈಟು, 65 ಎಕರೆ ಜಮೀನು ಹೊಂದಿರುವ ದಾಖಲೆಗಳು ಸೇರಿ ಅಂದಾಜು 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಜತೆಗೆ ಹಣ ಏಣಿಕೆ ಮಾಡುವ ಯಂತ್ರ ಕೂಡ ವಶಪಡಿಸಿಕೊಳ್ಳಲಾಗಿದೆ.
ವಾಗೀಶ ಶೆಟ್ಟರ್ ಹಾವೇರಿ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ, ರಾಣೆಬೆನ್ನೂರ ತಾಲೂಕಿನಲ್ಲಿಯೆ ಅತಿ ಹೆಚ್ಚು ಸರ್ಕಾರಿ ಶಾಲಾ ಕಟ್ಟಡ, ಹಾಸ್ಟೆಲ್ ಸೇರಿ ಇತರ ಕಾಮಗಾರಿಗಳನ್ನು ಮಾಡುತ್ತಿದ್ದರು. ವಾಗೀಶ ಜತೆ ಆತನ ಸಹೋದರ ಕೂಡ ಸಾಥ್ ನೀಡುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
ರಾಣೆಬೆನ್ನೂರ ಆರ್ಎಫ್ಓ ಕಿರಣಕುಮಾರ್ ಕಲ್ಲಮ್ಮನವರ, ವಾಗೀಶ ಮನೆಯಲ್ಲಿ ದೊರೆತ್ತಿರುವ ಜಿಂಕೆ ಕೊಂಬು ಬಹಳ ವರ್ಷದ ಹಿಂದಿನದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಿದ ಬಳಿಕ ಅದರ ಹಿನ್ನೆಲೆ ತಿಳಿಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು