ಮದ್ದೂರು : ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಸಂಭವಿಸಿದೆ.
ಉತ್ತರ ಪ್ರದೇಶ ಮೂಲದ ಬೆಂಗಳೂರಿನ ಐಟಿ ಉದ್ಯೋಗಿಯ ಪೋಷಕರು ಹಾಗೂ ಕಾರ್ ಚಾಲಕ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಲಿ ಒಬ್ಬನಿಗೆ ತೀವ್ರ ಗಾಯಗಳಾಗಿವೆ. ಆತನ ಪರಿಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ್ ತಮ್ಮ ತಂದೆ ತಾಯಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯ ಒಂದೇ ಬದಿಯಲ್ಲಿ ಸಾಗುತ್ತಿದ್ದ ಕಾರುಗಳ ನಡುವೆ ಡಿಕ್ಕಿಯಾಗಿ. ಸಾಗರ್ ನ ತಾಯಿ ಸೆಲ್ವಿ, ತಂದೆ ನೀರಜ್ ಕುಮಾರ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಸಾಗರ್ ಗಾಯಗೊಂಡಿದ್ದಾರೆ.ಬಸ್ ಸೀಟಿಗಾಗಿ ‘ಶಕ್ತಿ’ ಪ್ರದರ್ಶನ ಮಾಡಿದ ಮೈಸೂರು ಮಹಿಳೆಯರು
ಮದ್ದೂರುಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.