ಬೆಂಗಳೂರು : ಆಗಸ್ಟ್ನಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುನಿಯಪ್ಪ ಕೇಂದ್ರ ಸರ್ಕಾರವು ಹೆಚ್ಚುವರಿ ಅಕ್ಕಿ ನೀಡುವುದಕ್ಕೆ ಸಹಕಾರವನ್ನು ನೀಡುತ್ತಿಲ್ಲ, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಮುಂದಾಗಿದೆ, ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದರ ನಿಗದಿಯಾಗಲಿದೆ, ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಆಗಸ್ಟ್ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುವುದು ಅಂತ ತಿಳಿಸಿದರು.
ಕೇಂದ್ರ ಸರ್ಕಾರದಿಂಧ ಹೆಚ್ಚುವರಿ ಅಕ್ಕಿಯನ್ನು ಪಡೆದುಕೊಳ್ಳುವುದಾಕ್ಕಾಗಿ ಸಿಎಂ ಸೇರಿದಂತೆ ಹಲವು ನಾಯಕರುಗಳು ನವದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಅವರಿಂಧ ಯಾವುದೇ ಸಕಾರತ್ಮಕ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರುಗಳು ಕಿಡಿಕಾರುತ್ತಿದ್ದು, ಅನ್ನದಲ್ಲಿ ರಾಜಕೀಯ ಮಾಡಬಾರದು ಅಂತ ವಾಗ್ದಾಳಿ ನಡೆಸುತ್ತಿದ್ದಾರೆ.ಎಲ್ಲ ಠಾಣೆಗಳಲ್ಲಿ ಸೈಬರ್ ವಿಭಾಗ
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಅಶ್ವಾಸನೆಯಂತೆ ಪ್ರತಿ ಕುಟುಂಬಕ್ಕೆ ಕೇಂದ್ರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯದಿಂದ ಐದುಕೆಜಿ ಒಟ್ಟು ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿತ್ತು, ಆದರೆ ಈಗ ಅಕ್ಕಿ ನೀಡುವುದರಲ್ಲಿ ವಿಳಂಬವಾಗುತ್ತಿದೆ.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
- 3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ
More Stories
50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ