ಚಲಿಸುತ್ತಿದ್ದ ರೈಲಿನಿಂದ ಯುವತಿಯೋರ್ವಳು ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಯುವತಿಯನ್ನು ಶಿವಮೊಗ್ಗದ ಗಾಡಿಕೊಪ್ಪದ ಸಹನಾ(24) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಾಯಿ ಜೊತೆ ಇಂಟರ್ ಸಿಟಿ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಜರುಗಿದೆ.
ಶಿವಮೊಗ್ಗ ನಗರದ ತುಂಗಾ ನದಿಯ ಬ್ರಿಡ್ಜ್ ಮೇಲೆ ರೈಲು ಸಂಚರಿಸುತ್ತಿದ್ದಾಗ ಯುವತಿ ಬಾಗಿಲ ಬಳಿ ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಳಂತೆ. ಈ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾಳೆ ಎಂದು ಯುವತಿಯ ತಾಯಿ ತಿಳಿಸಿದ್ದಾರೆ.
ಈ ಬಗ್ಗೆ ಪೋಷಕರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಘಟನೆ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತುಂಗಾನದಿಯಲ್ಲಿ ಯುವತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು