ಕಾಂಗ್ರೆಸ್ ಸಭೆಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ, ಭೇಟಿಯ ವೇಳೆ ಪ್ರಧಾನಿಗೆ ಮೈಸೂರಿನ ಶ್ರೀಗಂಧದ ಅಂಬಾರಿ ಸಹಿತ ಆನೆಯ ಮೂರ್ತಿಯೊಂದನ್ನು ಉಡುಗೊರೆಯಾಗಿ ನೀಡಿದರು.
ಪ್ರಧಾನಿ ಮೋದಿಯವರೊಡನೆ ರಾಜ್ಯದ ವಿದ್ಯಮಾನಗಳು ಹಾಗು ಅಭಿವೃದ್ಧಿಯ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಸಹ ಭೇಟಿಯಾಗಿ ಮಾತುಕತೆ ನಡೆಸಿದರು.
ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದು ಮನವಿ

ಈ ಬಾರಿಯ ‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಅವರು ಮನವಿ ಸಲಿಸಿದ್ದರು.
ಇನ್ನೂ ದಸಾರ ಸಮಿತಿ ಸಭೆ ಬಳಿಕ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ನಾನು ಈ ಹಿಂದೆ ಸಿಎಂ ಆಗಿದ್ದ ವೇಳೆಯಲ್ಲಿ ಏರ್ಶೋ ಅನ್ನು ಹಮ್ಮಿಕೊಳ್ಳಲಾಗಿತ್ತು, ಈ ಬಾರಿ ಕೂಡ ಏರ್ಶೋ ನಡೆಸಲು ಉದ್ದೇಶಿಸಿದ್ದು, ‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಾಂ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಂಮುಂಡಿ ಬೆಟ್ಟದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು