March 8, 2026

Newsnap Kannada

The World at your finger tips!

dks

ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್

Spread the love

ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.

ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಆಣೆಕಟ್ಟೆ ಮೂಲಕ ನೀರು ಹರಿಸಲು ಬಹಳ ಒತ್ತಡ ಬಂದಿದೆ. ಜಿಲ್ಲಾ ಸಚಿವರು, ಶಾಸಕರುಗಳು ನೀರು ಹರಿಸುವಂತೆ ಕೇಳುತ್ತಿದ್ದಾರೆ.

ಇಲ್ಲಿ 105 ಟಿಎಂಸಿ ಶೇಖರಣಾ ಸಾಮರ್ಥ್ಯವಿದ್ದು, ಈಗಾಗಲೇ 83 ಟಿಎಂಸಿ ನೀರಿದೆ. ರೈತರಿಂದ ಬಹಳ ಬೇಡಿಕೆ ಇರುವ ಕಾರಣ 5575 ಕ್ಯೂಸೆಕ್ಸ್ ನೀರನ್ನು ಹರಿಸಲು ಅನುಮತಿ ನೀಡಲಾಗಿದ್ದು, ಈ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ ಎಂದರು.

ತುಂಗಭದ್ರಾ ಸಲಹಾ ಸಮಿತಿಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

error: Content is protected !!