ಮೈಸೂರು : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ‘ನಾದಬ್ರಹ್ಮ’ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿದ್ದು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು.
ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ:
ದಸಾರ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದೆ, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.ರಾಮನಗರ ಬಳಿ ರಸ್ತೆ ಅಪಘಾತ – 6 ಮಂದಿ ದುರಂತ ಸಾವು
ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ