February 18, 2026

Newsnap Kannada

The World at your finger tips!

WhatsApp Image 2023 07 25 at 8.23.39 PM

KRS ಆಣೆಕಟ್ಟೆಯಿಂದ ಮತ್ತೆ 5000 ಕ್ಯುಸೆಕ್ ತಮಿಳುನಾಡಿಗೆ ನೀರು

Spread the love

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.

ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ.

ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ.ಗೃಹ ಬಳಕೆ ಸಿಲಿಂಡರ್ ಬೆಲೆ 200 ರು ಇಳಿಕೆ – ಕೇಂದ್ರ ಸಚಿವ ಸಂಪುಟ ನಿರ್ಧಾರ

ಇಂದಿನ ನೀರಿನ ಮಟ್ಟ:

ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 101.58 ಅಡಿಗಳು
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 24.075 ಟಿಎಂಸಿ
ಒಳ ಹರಿವು – 2,300 ಕ್ಯೂಸೆಕ್
ಹೊರ ಹರಿವು – 7,380 ಕ್ಯೂಸೆಕ್

error: Content is protected !!