ರಾಯಚೂರು : ಮಂತ್ರಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಉತ್ತರಾಧನೆಯ ಸಮಾರಂಭಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು ಕೆಲಕಾಲ ಭಕ್ತರಲ್ಲಿ ಆತಂಕ ಸೃಷ್ಟಿ ಮಾಡಿತ್ತು.
ಘಟನೆಯು ಆಂಧ್ರಪ್ರದೇಶದ ಮಾಧಾವರಂ ಬಳಿ ನಡೆದಿದ್ದು, ಶ್ರೀ ಗುರು ರಾಘವೇಂದ್ರ ಆರಾಧನಾ ಮಹೋತ್ಸವಕ್ಕೆ ಪ್ರಯಾಣಿಕರು ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದ ಮಾಧವರಂ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಈ ಸಂದರ್ಭದಲ್ಲಿ ಪ್ರಯಾಣಿಕರು ಗಾಬರಿಗೆ ಒಳಗಾಗಿದ್ದರು. ತಕ್ಷಣ ಹತ್ತಿರದ ಮನೆಯಲ್ಲಿ ನೀರು ತಂದು ರೇಡಿಯೇಟರ್ ಮೇಲೆ ಸುರಿದಿದ್ದರಿಂದ ಹೊಗೆ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಯಾರಿಗೂ ತೊಂದರೆ ಆಗಿಲ್ಲ ಚಾಲಕ ತಕ್ಷಣ ನೀರು ತಂದು ಹಾಕಿರುವುದರಿಂದ ಅನಾಹುತ ತಪ್ಪಿದೆ. ಚಾಲಕನ ಸಮಯ ಪ್ರಜ್ಞೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi Helpers Recruitment-2023
ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಪ್ರಯಾಣಿಕರು, ಹಳೆಯದಾದ ಬಸ್ಗಳ ಅಸಮರ್ಪಕ ನಿರ್ವಹಣೆಯಿಂದ ಘಟನೆ ನಡೆದಿದೆ. ಕೂಡಲೇ ಹಳೆ ಬಸ್ಗಳನ್ನ ಬದಲಿಸಬೇಕು. ಬಸ್ಗಳ ನಿರ್ವಹಣೆ ಸರಿಯಾಗಿ ಮಾಡಬೇಕು ಎಂದು ದೂರಿದ್ದಾರೆ.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ