ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಸ್ವಲ್ಪ ದರಲ್ಲೇ ಎಸ್ಕೇಪ್ ಅಗಿದ್ದಾರೆ.
ಆದರೆ ಸಂಪತ್ ರಾಜ್ ಹಾಗೂ ಇತರ ಆರೋಪಿಗಳಿಗೆ ಕೆಲ ದಿನ ಆಶ್ರಯ ನೀಡಿದ್ದ ಆರೋಪದಡಿ ಬಿಬಿಎಂಪಿ ಗುತ್ತಿಗೆದಾರ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಿಯಾಜುದ್ದೀನ್, ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್. ಸಂಪತ್ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಜಾಕೀರ್ ಸ್ನೇಹಿತ. ಇದೀಗ ಸಂಪತ್ ರಾಜ್ ಹಾಗೂ ಜಾಕೀರ್ ಇಬ್ಬರೂ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ.
‘ಆರೋಪಿಗಳು ಪರಾರಿಯಾಗಲು ರಿಯಾಜುದ್ದೀನ್ ಸಹಾಯ ಮಾಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನ ಉಳಿದುಕೊಂಡಿದ್ದರು. ನಂತರ, ಅಲ್ಲಿಂದ ಬೇರೆಡೆ ಆರೋಪಿಗಳು ಹೊರಟು ಹೋಗಿದ್ದಾರೆ’ ಎಂದು ಸಿಸಿಬಿ ಜಂಟಿ ಕಮೀಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.
ರಿಯಾಜುದ್ದೀನ್ನನ್ನು ಬಂಧಿಸಿ ಹೇಳಿಕೆ ಪಡೆಯಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಸಂಪತ್ ರಾಜ್ ಬಂಧನಕ್ಕೂ ಬಲೆ ಬೀಸಲಾಗಿದೆ’ ಎಂದೂ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು