ಕಲಾವತಿ ಪ್ರಕಾಶ್
ರಾಯಚೂರು
ರಾಯಿ ಎಂದರೆ ಕಲ್ಲೆಂಬ ಅರ್ಥವಂತೆ
ಕಲ್ಲು ಬೆಟ್ಟಗಳೂರು ರಾಯಚೂರಂತೆ
ರಾಯನ ಊರು ರಾಯಚೂರೆಂದು
ಹೆಸರು ಪಡೆದು ಕೊಂಡಿದೆಯಂತೆ
ಶಿಲಾಯುಗದಿಂದಲೇ ಆರಂಭಗೊಂಡಿದೆ
ಇಲ್ಲಿಯ ಇತಿಹಾಸ ಪರಂಪರೆಯು
ಮೌರ್ಯ ಚಾಲುಕ್ಯ ಶಾತವಾಹನ
ಯಾದವ ನಿಜಾಮರಾಳ್ವಿಕೆಯು
ಎನಿತೋ ಸಾಮ್ರಾಜ್ಯಗಳ ಇತಿಹಾಸದ
ಪುಟಗಳ ತೆರೆದಿಡುವ ಕೋಟೆಗಳಿಹವಿಲ್ಲಿ
ಕಾಕತೀಯರು ನಿರ್ಮಿಸಿದಂಥ
ಕೋಟೆ ಇರುವುದೂ ರಾಯಚೂರಿನಲ್ಲಿ
ಜಲದಿಂದಾವೃತ ಜಲದುರ್ಗ ಕೋಟೆ
ಶಾಹಿ ದೊರೆಗಳ ನಿರ್ಮಿತ ಕೋಟೆ
ಇತಿಹಾಸದಲ್ಲೇ ಪ್ರಸಿದ್ಧ ಪೇಟೆ
ನೂರಾರು ಶಾಸನಗಳಿಹ ಮುದ್ಗಲ್ ಕೋಟೆ
ಕೃಷ್ಣ ತುಂಗಭದ್ರಾ ಹರಿಯುವ
ಜಿಲ್ಲೆ ಈ ನಾಡಾದರೂ
ಜಲ ಕ್ಷಾಮ ಎದುರಿಸುವರು
ಬಹು ಭಾಗದ ಈ ಜಿಲ್ಲೆಯ ಜನರು
ಹತ್ತಿಯ ನಾಡೆಂದು ಹೆಸರಾಗಿರುವ
ಭತ್ತದ ಕಣಜವೂ ಈ ಜಿಲ್ಲೆ
ದೇಶದಲ್ಲೇ ಅತಿ ಹೆಚ್ಚು ಟ್ರ್ಯಾಕ್ಟರ್
ಆಮದು ಮಾರಾಟ ಮಾಡುವುದಿಲ್ಲೆ
ಭಾರತದೊಳಗತಿ ಚಿನ್ನದ ಅದಿರಿನ
ಗಣಿ ಇರುವುದೂ ಈ ಜಿಲ್ಲೆಯಲಿ
ಗಣಿಗಾರಿಕೆ ಆರಂಭವು ಕೂಡ
ಅಶೊಕನ ಕಾಲಕೂ ಮೊದಲಲ್ಲೇ
ರಾಯಚೂರಿನ ಶಕ್ತಿ ನಗರದ
ಶಾಖೋತ್ಪನ್ನಕೆ ಕಲ್ಲಿದ್ದಲೇ ಆಧಾರ
ಭಾರತದ ಮೊದಲ ವಿದ್ಯುತ್ ಘಟಕ
ಕರುನಾಡಿನ ಹೆಚ್ಚು ಉತ್ಪಾದನೆಯ ಸ್ಥಾವರ
ಮೂರು ಯುಗಗಳ ತಪೋ ಭೂಮಿ ಈ ಊರು
ಅಮರೇಶ್ವರದ ಕಪಿಲ ಅಗಸ್ತ್ಯಮುನಿ ರೇವಣಸಿದ್ಧರು
ವಚನ ಸಾಹಿತ್ಯದ ಪಿತಾಮಹರಿವರು
ಹೆಸರಾಂತ ಆದಿ ಅಮಾತ್ಯಪ್ಪ ಮೊದಲಿಗರು
ಹರಿದಾಸ ಸಾಹಿತ್ಯದ ಉಗಮದ ಊರು
ಇದೇ ಜಿಲ್ಲೆಯ ರಾಯಚೂರು
ಇಲ್ಲಿಯೆ ಜನಿಸಿದ ದಾಸ ಸಾಹಿತಿಗಳಿವರು
ಅವರೇ ನಮ್ಮ ಜಗನ್ನಾಥ,ವಿಜಯದಾಸರು
ಕನ್ನಡ ಸಾಹಿತ್ಯದ ಗಝಲ್ ಜನಕರೆಂದು
ಹೆಸರು ಪಡೆದವರು ಶಾಂತರಸರು
ಗಿರಿರಾಜ್ ಹೊಸಮನಿ ಭೀಮಸೇನ್ ರಾವ್
ರಾಯಚೂರಿನ ಸಾಹಿತಿಗಳು ಇವರು
ಯಲ್ಲಮ್ಮ ದೇವಿಯ ದೇವಸ್ಥಾನ
ಅಂಬಾದೇವಿಯ ಮಂದಿರದೂರು
ಎರಡನೆ ಶ್ರೀಶೈಲವೆಂಬ ಈ ಊರು
ನೆಲೆಸಿಹರಿಲ್ಲಿ ಮಲ್ಲಿಕಾರ್ಜುನ ದೇವರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು