January 29, 2026

Newsnap Kannada

The World at your finger tips!

DK

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಸಮೀಕ್ಷೆ ಆರಂಭ: ಡಿಕೆಶಿ

Spread the love

ರಾಮನಗರ : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಜಿಲ್ಲೆಯ ನಿವಾಸಿಗಳ ಅಭಿಪ್ರಾಯ ಪಡೆಯಲು ಸಮೀಕ್ಷೆ ಆರಂಭಿಸಿರುವುದಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು .

ಜಿಲ್ಲೆಗೆ ಮರುನಾಮಕರಣ ಮಾಡುವ ನಿರ್ಧಾರಕ್ಕೆ ತಾನು ಬದ್ಧವಾಗಿದ್ದೇನೆ. ನನ್ನ ವೈಯಕ್ತಿಕ ಸಾಮರ್ಥ್ಯದಲ್ಲಿ ಸಮೀಕ್ಷೆಯನ್ನು ಮಾಡುತ್ತಿದ್ದೇನೆ. ಈವರೆಗೆ ಸಮೀಕ್ಷೆಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಸಮೀಕ್ಷಾ ವರದಿ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಸಚಿವ ಸಂಪುಟದ ಒಪ್ಪಿಗೆ ದೊರೆತ ನಂತರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗುವುದು ಎಂದರು .

ರಾಮನಗರವು ಬೆಂಗಳೂರು ದಕ್ಷಿಣ ಜಿಲ್ಲೆಯ ಕೇಂದ್ರವಾಗಿ ಉಳಿಯುತ್ತದೆ. ಈಗಿರುವ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲೂಕುಗಳು ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗವಾಗಿಯೇ ಮುಂದುವರಿಯಲಿವೆ. ಜಿಲ್ಲೆಗೆ ಹೊಸ ಪ್ರದೇಶಗಳನ್ನು ಸೇರಿಸುವ ಪ್ರಸ್ತಾವನೆ ಇಲ್ಲ ಎಂದರು.

ಮರುನಾಮಕರಣದ ನಂತರ, ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಮೂಲಸೌಕರ್ಯಗಳನ್ನು ಸುಧಾರಿಸುವ ಮೂಲಕ ಬೆಂಗಳೂರಿನ ಉಪ ಪಟ್ಟಣಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜಿಸುತ್ತಿದೆ. ನಮ್ಮ ಮೆಟ್ರೋವನ್ನು ನಾಲ್ಕೂ ತಾಲ್ಲೂಕುಗಳಿಗೂ ವಿಸ್ತರಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಮಾಗಡಿ ಮತ್ತು ಕನಕಪುರ ತಾಲೂಕುಗಳಿಗೆ ಕೈಗಾರಿಕೆಗಳನ್ನು ಆಕರ್ಷಿಸುವುದು ಜಿಲ್ಲೆಯ ಮರುನಾಮಕರಣದ ಮುಖ್ಯ ಉದ್ದೇಶವಾಗಿದೆ. ಈ ಪ್ರದೇಶಗಳಲ್ಲಿ ಸ್ಥಾವರಗಳನ್ನು ಸ್ಥಾಪಿಸಲು ಹಲವಾರು ಕೈಗಾರಿಕೋದ್ಯಮಿಗಳನ್ನು ವಿನಂತಿಸಿದಾಗ, ಈ ಸ್ಥಳಗಳಿಗೆ ಬೆಂಗಳೂರು ಹೆಸರಿಲ್ಲ. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ : ಮಾಜಿ ಸಿಎಂ ಡಿವಿಎಸ್

ಬೆಂಗಳೂರು ಎಂಬ ಪದವು ತನ್ನದೇ ಆದ ಬ್ರಾಂಡ್ ಮೌಲ್ಯವನ್ನು ಹೊಂದಿರುವುದರಿಂದ ಹೂಡಿಕೆದಾರರನ್ನು ಆಕರ್ಷಿಸಲು ನಾವು ಅದನ್ನು ಬಳಸಿಕೊಳ್ಳಲು ಬಯಸಿದ್ದೇವೆ ಎಂದು ಅವರು ಹೇಳಿದರು.

error: Content is protected !!