ಗೊರೂರಿನ ಹೇಮಾವತಿ ಜಲಾಶಯದ ಬಳಿ ನಡೆದ ಘಟನೆ
ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದ ಯುವತಿ
ಯುವತಿಗಾಗಿ ನಡೆಯುತ್ತಿದೆ ಅಗ್ನಿಶಾಮಕದಳದಿಂದ ಶೋಧಕಾರ್ಯ
ಹಾಸನ:
ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ, ಗೊರೂರಿನಲ್ಲಿ ನಡೆದಿದೆ.
ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿ, ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯ (19) ಹನುಮ ಜಯಂತಿ ಹಿನ್ನಲೆಯಲ್ಲಿ ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ನಿತ್ಯ ಆಟವಾಡಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ನಿತ್ಯಳ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ