ಬೆಂಗಳೂರು: BBMP ಪೌರಕಾರ್ಮಿಕರಿಗೆ ನಿವೇಶನ ನೀಡಲಾಗುವುದೆಂದು ಅಪಪ್ರಚಾರ ಮಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದೆ.
ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ನಿವೇಶನಗಳನ್ನು ನೀಡುವ ಯೋಜನೆ ಸದ್ಯಕ್ಕೆ ಇಲ್ಲ , ಅಧಿಕೃತವಾಗಿ ನಿವೇಶನ ಹಂಚಿಕೆ ಕುರಿತು ಪಾಲಿಕೆಯಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ.
ವದಂತಿಗಳನ್ನ ನಂಬಿ ಹಣ ಕೊಟ್ಟರೆ ಅದಕ್ಕೆ ಪಾಲಿಕೆ ಜವಾಬ್ದಾರಿಯಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.ಇಂದು ರಾತ್ರಿ ಮೈಸೂರಿಗೆ ಆಗಮಿಸಲಿರುವ ಅಮಿತ್ ಶಾ
ನಿವೇಶನ ಕೊಡಿಸೋದಾಗಿ ನಂಬಿಸಿ, ಅಮಾಯಕರಿಂದ ಹಣವನ್ನ ವಸೂಲಿ ಮಾಡುತ್ತಿರುವ ಬಗ್ಗೆ ಪಾಲಿಕೆಗೆ ದೂರುಗಳು ಬಂದಿದ್ದು , ಇದರಿಂದ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟೀಕರಣ ನೀಡಿದೆ.