ಪ್ರದೀಪ್ ಈಶ್ವರ್ ವಿರುದ್ಧ ‘ ಮಾನನಷ್ಟ ಮೊಕದ್ದಮ್ಮೆ’ ದಾಖಲಿಸಿದ ಪ್ರತಾಪ್ ಸಿಂಹ

Team Newsnap
1 Min Read

ಬೆಂಗಳೂರು : ಈ ಹಿಂದೆ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್ ಏಕವಚನದಲ್ಲಿ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದು ,ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಲಗುರ್ಕಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ಶಂಕು ಸ್ಥಾಪನೆಯ ವೇಳೆ, ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ , ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಮ್ಮನಿದ್ದರೆ ಸರಿ ,ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂಬ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.

ಈ ವಿಷಯ ಕುರಿತು ಮಾತನಾಡಿದ ತಾಪ್ ಸಿಂಹ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿ , ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ.ಮಂಡ್ಯ -‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಹತ್ಯೆ

ಪ್ರತಾಪ್ ಸಿಂಹ ಅವರು ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ.

Share This Article
Leave a comment