ರಾಮನಗರ: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಸಮೀಪದ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿದ್ದು , ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಿನ್ನೆ ಮಹಾ ಶಿವರಾತ್ರಿಯ ಅಮವಾಸ್ಯೆ ಮುಗಿದಿದ್ದು, ಬಲರಾಮ್ ಸ್ಮಶಾನದಲ್ಲಿ ತಲೆ ಬುರಡೆಗಳಿಗೆ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸಾರ್ವಜನಿಕರ ದೂರಿನ ಮೇರೆಗೆ ಬಲರಾಮ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದಾರೆ.ಎಷ್ಟಾಗಲೀ ಹೆಣ್ಣಲ್ಲವೇ
ಪೊಲೀಸರು ಭೇಟಿ ನೀಡಿದ ವೇಳೆ ಮನೆಯಲ್ಲಿ ಕಂಡುಬಂದ ತಲೆ ಬುರಡೆಗಳು, ಮೂಳೆಗಳ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು