January 29, 2026

Newsnap Kannada

The World at your finger tips!

money2

ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣ ಮಂಡ್ಯದಲ್ಲಿ ಜಪ್ತಿ !

Spread the love

ಮಂಡ್ಯ : ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ.

ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1 ಕೋಟಿ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಮದ್ದೂರು ಪೊಲೀಸರು ಇಂದು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದ ಕಾರ್ ಅನ್ನು ತಪಾಸಣೆ ಮಾಡಿದಾಗ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ

ಕ್ರೇಟಾ ಕಾರ್ ಅನ್ನು ತಡೆದ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ಮಾಡುವಾಗ 1 ಕೋಟಿ ರೂಪಾಯಿ ಪತ್ತೆಯಾಗಿದೆ.

ಬೆಂಗಳೂರಿನಿಂದ ಗಿರೀಶ್ ಹ್ಯೂಂಡಾಯ್ ಕ್ರೇಟಾ (ಕೆಎ – 54 – ಎಂ – 4030) ಕಾರಿನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಮದ್ದೂರು ತಾಲೂಕಿನ ಗಡಿಭಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣವನ್ನು ತುಂಬಿರುವುದನ್ನು ನೋಡಿ ಶಾಕ್ ಆಗಿದ್ದಾರೆ.

ಈ ಬಗ್ಗೆ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದ್ದಾರೆ. ದೊರೆತ ಹಣಕ್ಕೆ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!