ಚಂಡೀಗಢ : ಇಂದು ಸೋನಿಪತ್ ಜಿಲ್ಲೆಯ ರಾಯ್ ಕೈಗಾರಿಕಾ ಪ್ರದೇಶದ ರಬ್ಬರ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು , ಸಿಲಿಂಡರ್ಗಳು ಸ್ಫೋಟಗೊಂಡು 40ಕ್ಕೂ ಹೆಚ್ಚು ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ.
ಕಾರ್ಖಾನೆಯಲ್ಲಿ ಸಿಲುಕಿದ್ದ ನೌಕರರನ್ನು ಅಗ್ನಿ ಅವಘಡದ ಸಂದರ್ಭದಲ್ಲಿ ರಕ್ಷಿಸಲಾಗಿದ್ದು ,ಘಟನೆ ನಡೆದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ: ಸಂತ್ರಸ್ತ ಬಾಲಕಿ ಮನೆಯಿಂದ ಕಾಣೆ
ಕಾರ್ಖಾನೆಯಲ್ಲಿ ರಬ್ಬರ್ ಇದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿದ್ದು ,16 ಮಂದಿ ಕಾರ್ಮಿಕರು ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.