February 17, 2026

Newsnap Kannada

The World at your finger tips!

POLITICAL MINISTER

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

Spread the love

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ.

ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ಉಂಟಾಗಿದ್ದ ಗಲಭೆಯ ಬೆಳವಣಿಗೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲು ನೀಡಲಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಬದ್ರಿಕೊಪ್ಪಲು ಬಡಾವಣೆಗೂ ಸಮಿತಿ ಭೇಟಿ ನೀಡಲಿದ್ದು ,ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯು ಆರಂಭದಿಂದ ಅಂತ್ಯದ ವರೆಗೆ ಏನೆಲ್ಲಾ ನಡೆದಿದೆ ಎನ್ನುವುದರ ಬಗ್ಗೆ ಸತ್ಯಶೋಧನಾ ಸಮಿತಿ ಮಾಹಿತಿ ಕಲೆಹಾಕಲಿದೆ.

ರಾಜ್ಯ ಸರ್ಕಾರ , ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಹೈಕಮಾಂಡ್‌ಗೆ ಸಮಗ್ರವಾಗಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಕೆ ಮಾಡಲಾಗುತ್ತದೆ.ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ಬಿಜೆಪಿ ನಾಯಕರ ನೇತೃತ್ವದ ಸಮಿತಿಗೆ ಜೆಡಿಎಸ್ ಮುಖಂಡರೂ ಸಾಥ್‌ ನೀಡಲಿದ್ದಾರೆ.

error: Content is protected !!