BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

Team Newsnap
1 Min Read

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ 45 ಜನರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ.

ಕೆ ಎ 51 ಎಜೆ 6905 ನಂಬರ್ ಬಸ್ ಡ್ರೈವರ್ ದಿನೇಶ್ ಅವರಿಗೆ ಚಾಲನೆ ಮಾಡುತ್ತಿರುವಾಗಲೇ ಹೃದಯಘಾತ ಸಂಭವಿಸಿದ್ದು , ಬಸ್ ನಿಧಾನಕ್ಕೆ ಚಲಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ಕೂಡಲೇ ಧಾವಿಸಿ ಬಸ್ ಚಾಲಕನನ್ನು ರಕ್ಷಿಸಿದ್ದಾರೆ.

ಇದನ್ನು ಓದಿ – ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಹಲಸೂರಿನ ಟ್ರಾಫಿಕ್ ASI ರಘು ಹಾಗೂ ಕಾನ್ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ 45 ಜನ ಜನರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ.

Share This Article
Leave a comment