February 15, 2026

Newsnap Kannada

The World at your finger tips!

WhatsApp Image 2024 09 21 at 10.00.45 AM

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

Spread the love

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ನಡೆದಿದೆ.

ದಾಳಿಗೆ ತತ್ತರಿಸಿದ ಕಂಜನ್‌ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದೆ .

ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದು , ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಅವನನ್ನು ಹಿಡಿದು ತರಲು ಹರಸಾಹಸ ಪಡುತ್ತಿರುವ ದೃಶ್ಯಗಳೂ ಸೆರೆಯಾಗಿದೆ .

ಕಂಜನ್‌ನನ್ನು ನಿಯಂತ್ರಿಸಲು ಮಹೇಂದ್ರ ಆನೆಯು ಹಿಂದಿನಿಂದ ಓಡಿದ್ದು ,ಆನೆ ಓಡಿಬರುವುದನ್ನು ಜನರು ನೋಡಿ ದಿಕ್ಕಾಪಾಲಾಗಿ ಓಡಿದ್ದಾರೆ.

ಕಂಜನ್ ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿದ್ದನು.ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಘಟನೆಯು ರಾತ್ರಿ 8ರ ಸುಮಾರು ನಡೆದಿದ್ದು ,ಮಾವುತರು ಕಾವಾಡಿಗರು ಸಮಾಧಾನ ಪಡಿಸಿದ್ದಾರೆ.

error: Content is protected !!