ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Team Newsnap
1 Min Read

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು , ತೆರಿಗೆ ಮೌಲ್ಯಮಾಪಕ ಪ್ರಕಾಶ್ ಹಾಗೂ ಎಆರ್ ಒ ರಾಜೇಂದ್ರಪ್ರಸಾದ್ ಬಂಧಿತರು.

ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು 4.50 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ,ಲಂಚದ ಹಣದ ಸಮೇತ ಇಬ್ಬರು ಅಧಿಕಾರಿಗಳು ಸಿಕ್ಕಿದ್ದಿದ್ದಾರೆ.ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಬೆಂಗಳೂರಿನ ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article
Leave a comment