October 23, 2024

Newsnap Kannada

The World at your finger tips!

mandya , news , politics

ಸಿ.ಪಿ ಯೋಗೇಶ್ವರ್ ರಿಂದ ಬಿಜೆಪಿಗೆ ದ್ರೋಹ : ಅಶೋಕ್

Spread the love

ಬೆಂಗಳೂರು: ಕಾಂಗ್ರೆಸ್‌ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರು ಬಿಜೆಪಿ ಮೇಲೆ ದ್ರೋಹ ಬಗೆದಿದ್ದಾರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್‌ ಗೆ ಟಿಕೆಟ್ ಕೊಡಿಸಲು ಕೊನೆಯ ಕ್ಷಣದವರೆಗೂ ಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ – ಬೆಂಗಳೂರು ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕನ ಬಂಧನ

ಯೋಗೇಶ್ವರ್‌ ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದಲ್ಲಿ ಇರಲಿಲ್ಲ, ಮತ್ತು ಅವರು ಪಕ್ಷದ ದೃಷ್ಟಿಕೋಣವನ್ನೂ ಗೌರವಿಸಲಿಲ್ಲ ಎಂದು ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!