ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ, ರಾಜ್ಯದ ಹಲವು ಭಾಗಗಳಲ್ಲಿ ಡಿಸೆಂಬರ್ 4ರವರೆಗೆ ಭಾರೀ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಲಾಗಿದೆ.
ವಾಯುಭಾರ ಕುಸಿತದ ಪರಿಣಾಮ
ಹವಾಮಾನ ಇಲಾಖೆ ಪ್ರಕಾರ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಿದೆ. ಇದು ಮಂಗಳವಾರ ಬೆಳಿಗ್ಗೆ ತೀವ್ರ ಸ್ವರೂಪ ಪಡೆದು, ಪ್ರತಿ ಗಂಟೆಗೆ 12 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿದೆ. ಈ ವಾಯುಭಾರ ಕುಸಿತ ಮುಂದಿನ 24 ಗಂಟೆಗಳಲ್ಲಿ ಹೆಚ್ಚು ತೀವ್ರಗೊಂಡು, ನವೆಂಬರ್ 27ರ ಸಂಜೆ ಚಂಡಮಾರುತ ಸ್ಥಿತಿಗೆ ಬದಲಾಗುವ ಸಾಧ್ಯತೆಯಿದೆ.
ಡಿಸೆಂಬರ್ 4ರವರೆಗೆ ಭಾರೀ ಮಳೆಯ ಮುನ್ಸೂಚನೆ
ನವೆಂಬರ್ 28ರಿಂದ ಡಿಸೆಂಬರ್ 4ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಲಕ್ಷಣಗಳಿವೆ.ಇದನ್ನು ಓದಿ -RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ನೀಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು