ಅಮರಾವತಿ ಸಹೋದರರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ – ಕಾರ್ಯಕರ್ತರ ಕೂಗು

Team Newsnap
1 Min Read

ಪಕ್ಷ ವಿರೋಧ ಚಟುವಟಿಕೆ ಮಾಡಿರುವ ಅಮರಾವತಿ ಚಂದ್ರಶೇಖರ್ ಮತ್ತು ಸಹೋದರರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಕೋರಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರಿಗೆ ಪತ್ರ ಬರೆದಿದ್ದಾರೆ.

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣರಾದ ಅಮರಾವತಿ ಚಂದ್ರಶೇಖರ್ ಮತ್ತು ಅಮರಾವತಿ ಅಶ್ವತ್ಥ್ ರವರನ್ನು ಪಕ್ರದಿಂದ ಉಚ್ಛಾಟಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಕೂಗು ಹಾಕಿದ್ದಾರೆ.

ಅಮರಾವತಿ ಚಂದ್ರಶೇಖರ್ ರವರು ಹಣ ಮತ್ತು ಅಧಿಕಾರಕ್ಕಾಗಿ ಎಂತಹ ಹೀನ ಕೃತ್ಯಕ್ಕೂ ಕೈ ಹಾಕುತ್ತಾರೆ ಹಾಗೂ ಕಾಂಗ್ರೆಸ್ ಪಕ್ಷದ ವಿರೋಧಿಗಳ ಜೊತೆ ಕೈ ಜೋಡಿಸುತ್ತಾರೆ ಎಂಬುದಕ್ಕೆ ಹಲವು ಉದಾಹರಣೆಗಳು ಇವೆ. ಹೀಗೆ ಪ್ರತಿ ಚುನಾವಣೆಗಳಲ್ಲಿ ವಿರೋಧ ಪಕ್ಷಗಳ ಜೊತೆ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೂ ಕಾರಣವಾಗುತ್ತಾ, ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆ ಮಾಡಿಕೊಂಡು ಬಂದಿರುವಂತಹ ಇವರನ್ನು ಈ ಕೂಡಲೇ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವುದರ ಜೊತೆಗೆ ಪಕ್ಷದಲ್ಲಿ ಕಡ್ಡಾಯವಾಗಿ ಶಿಸ್ತನ್ನು ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಮೂಲಕ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಆಗಿರುವ ನೋವನ್ನು ಸರಿಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಕೆ.ಪಿ.ಸಿ.ಸಿ ಕಛೇರಿಯ ನ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article
Leave a comment