February 17, 2026

Newsnap Kannada

The World at your finger tips!

siddarama

ಮುಡಾ ಪ್ರಕರಣ: ಕ್ಲೀನ್ ಚಿಟ್ ವದಂತಿ – ‘ನನಗೆ ಗೊತ್ತಿಲ್ಲ’ ಎಂದು ಸಿಎಂ ಸ್ಪಷ್ಟನೆ

Spread the love

ಬೆಂಗಳೂರು: ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಕುರಿತು ವದಂತಿ ಹರಡುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ತಳ್ಳಿ ಹಾಕಿದ್ದಾರೆ. ‘ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಕ್ಲೀನ್ ಚಿಟ್ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ನನಗೆ ಈ ಬಗ್ಗೆ ಗೊತ್ತಿಲ್ಲ,’ ಎಂದು ಸ್ಪಷ್ಟಪಡಿಸಿದ ಸಿಎಂ, ಬಜೆಟ್ ತಯಾರಿಯ ಕಾರಣದಿಂದ ದಾವೋಸ್‌ ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾಗವಹಿಸದಿರುವುದಾಗಿ ತಿಳಿಸಿದ್ದಾರೆ.ಇದನ್ನು ಓದಿ -ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ಹೆಚ್‌ ವಿಶ್ವನಾಥ್

ಡಿ.ಕೆ.ಶಿವಕುಮಾರ್ ಬಗ್ಗೆ ಸಿಎಂ ಪ್ರತಿಕ್ರಿಯೆ:
ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಕೂಗು ಹಾಗೂ ಈ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ‘ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ,’ ಎಂದು ಹೇಳಿದ್ದಾರೆ.

error: Content is protected !!