January 28, 2026

Newsnap Kannada

The World at your finger tips!

mandya

ಮಂಡ್ಯ: ವಿಸಿ ನಾಲೆಗೆ ಕಾರು ಬಿದ್ದ ದುರಂತ – ಮತ್ತೊಬ್ಬನ ಶವ ಪತ್ತೆ, ಸಾವಿನ ಸಂಖ್ಯೆ ಮೂವರಿಗೆ ಏರಿಕೆ

Spread the love

ಮಂಡ್ಯ: ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಬಿದ್ದು ಸಂಭವಿಸಿದ ದುರಂತದಲ್ಲಿ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂವರಿಗೆ ಏರಿದೆ.

ತಿಬ್ಬನಹಳ್ಳಿಯ ಬಳಿ ಇರುವ ವಿಸಿ ನಾಲೆಯಲ್ಲಿ ಪೀರ್ ಖಾನ್ ಎಂಬುವವರ ಶವ ಪತ್ತೆಯಾಗಿದ್ದು, ಅವರು ಮಂಡ್ಯ ಜಿಲ್ಲೆಯ ಹಾಲಹಳ್ಳಿ ಸ್ಲಂ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ -ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ: ಎಫ್‌ಐಆರ್ ದಾಖಲು

ಈ ದುರಂತದಲ್ಲಿ ಸಾವಿನ ಸಂಖ್ಯೆ ಈಗ ಮೂರು ಆದ್ದರಿಂದ ಸ್ಥಳೀಯರು ಮತ್ತು ಕುಟುಂಬದ ಸದಸ್ಯರಲ್ಲಿ ಆಘಾತ ಮೂಡಿಸಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.

error: Content is protected !!