March 21, 2025

Newsnap Kannada

The World at your finger tips!

lake 1

ಕೊಡಗಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ

Spread the love

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನವೋದಯ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಅಮಿತ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಫೆಬ್ರವರಿ 11ರಂದು ತರಗತಿಯಲ್ಲಿದ್ದಾಗ ಇಂಗ್ಲಿಷ್ ಪುಸ್ತಕ ತರುವುದಾಗಿ ಹೇಳಿ ಕ್ಲಾಸ್‌ರೂಮ್‌ನಿಂದ ಹೊರಗೆ ಹೋಗಿದ್ದ. ಅದಾದ ಬಳಿಕ ಅವನು ನಾಪತ್ತೆಯಾಗಿದ್ದ.

ನಿನ್ನೆ ಕೂಟುಪೊಳೆ ಬಳಿ ಅಮಿತ್‌ನ ಚಪ್ಪಲಿ ಪತ್ತೆಯಾಗಿತ್ತು. ಇಂದು ಅದೇ ನದಿಯಲ್ಲಿ ಅವನ ಶವ ಪತ್ತೆಯಾಗಿದೆ.

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.ಇದನ್ನು ಓದಿ –ಮೆಟ್ರೊ ದರ ಪರಿಷ್ಕರಣೆ: ಶೇ 70ಕ್ಕಿಂತ ಹೆಚ್ಚು ಏರಿಕೆಯಾದಲ್ಲಿ ಶೇ 30ರಷ್ಟು ಇಳಿಕೆ

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Copyright © All rights reserved Newsnap | Newsever by AF themes.
error: Content is protected !!