ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ. ಜಗದೀಶ್ (28) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಈತ ಮತ್ತು ಸಹಚರರು ಕಾರಿನ ಗಾಜು ಒಡೆದು 33 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದರು. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು, ಇದನ್ನಾಧರಿಸಿ ಪೊಲೀಸರು ತನಿಖೆ ಕೈಗೊಂಡು ಜಗದೀಶ್ ಅನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯಿಂದ 30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ:
ಸಿವಿಲ್ ಕಾನ್ಟ್ರ್ಯಾಕ್ಟರ್ ಸಂತೋಷ್ ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂಪಾಯಿ ಹಣವನ್ನು ಸಂಬಂಧಿಕರ ಖಾತೆಯಿಂದ ಚೆಕ್ ಮುಖಾಂತರ ಡ್ರಾ ಮಾಡಿಕೊಂಡಿದ್ದರು. ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿಟ್ಟು ಹೊರಡುತ್ತಿದ್ದಂತೆ, ಕಳ್ಳರು ಈ ಸುಲಭಾವಕಾಶವನ್ನು ಬಳಸಿಕೊಂಡು ಕಾರಿನ ಗಾಜು ಒಡೆದು ಕ್ಷಣಾರ್ಧದಲ್ಲಿ ಹಣ ದೋಚಿ ಪರಾರಿಯಾದರು.
ಇದನ್ನು ಓದಿ -ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
ಈ ಕುರಿತು ಹಾವೇರಿ ಪೊಲೀಸರು ತನಿಖೆ ಮುಂದುವರಿಸಿಕೊಂಡು ಇನ್ನೂ ಪರಾರಿಯಾಗಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು