ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷ ನಡೆಯಬೇಕಿದ್ದ 8ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಟೂರ್ನಿಯನ್ನ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ ಎಂದು ಲೀಗ್ ಸಂಘಟಕರು ಅಧಿಕೃತವಾಗಿ ಘೋಷಿಸಿದ್ದಾರೆ.
ಟ್ವೀಟ್ ಮೂಲಕ ವಿಷಯ ತಿಳಿಸಿರುವ ಪ್ರೊ ಕಬಡ್ಡಿ ಲೀಗ್ ಸಂಘಟಕರು, ‘ ಸಧ್ಯದ ಪರಿಸ್ಥಿತಿ, ಸರ್ಕಾರದ ಮಾರ್ಗಸೂಚಿಗಳನ್ನ ಗಮನಿಸಿ ಹಾಗೂ ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಪ್ರೊ ಕಬಡ್ಡಿ ಲೀಗ್ ಟೂರ್ನಿಯನ್ನ ಮುಂದೂಡಿಕೆ ಮಾಡಲಾಗುತ್ತಿದೆ. ಟೂರ್ನಿ ನಡೆಸಲು ಸುರಕ್ಷಿತ ವಾತಾವರಣ ನಿರ್ಮಾಣವಾದಾಗ ಮುಂದಿನ ವರ್ಷ ಟೂರ್ನಿಯನ್ನ ಆಯೋಜಿಸಲಾಗುವುದು’ ಎಂದು ತಿಳಿಸಿದ್ದಾರೆ.
ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆಯನ್ನ ಏಪ್ರಿಲ್ನಲ್ಲಿ ನಿಗದಿ ಮಾಡಲಾಗಿತ್ತು. ಆದರೆ ನಂತರದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಮೂಲ ವೇಳಾಪಟ್ಟಿಯ ಪ್ರಕಾರ ಈ ವರ್ಷ ಜುಲೈನಿಂದ ಅಕ್ಟೋಬರ್ ನಡುವೆ ಟೂರ್ನಿ ನಡೆಯಬೇಕಾಗಿತ್ತು. ಇದಲ್ಲದೆ ಟೂರ್ನಿ ಆಯೋಜನೆಗೆ ಶ್ರೀಲಂಕಾದಿಂದಲೂ ಆಹ್ವಾನ ಬಂದಿತ್ತು. ಆದರೆ ಸಂಘಟಕರು, ಟೂರ್ನಿ ಆಯೋಜಿಸುವುದಿದ್ದರೆ ಅದು ಭಾರತದಲ್ಲಿ ಮಾತ್ರ ಎಂದು ಸ್ಪಷ್ಟಪಡಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ