ಕರ್ತವ್ಯ ಲೋಪ ಆರೋಪದಡಿಯಲ್ಲಿ ಓರ್ವ ಪಿಎಸ್ಐ ಸೇರಿದಂತೆ 6 ಜನ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬುವರನ್ನು ಅಮಾನತು ಮಾಡಲಾಗಿದೆ.
ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿಯೇ ಆಲ್ದೂರು ಠಾಣೆ ಪೊಲೀಸ್ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವರನ್ನು ಅಮಾನತು ಮಾಡಲಾಗಿದೆ.
ಅಮಾನತುಗೊಂಡ ಬಸವನಹಳ್ಳಿ ಠಾಣೆ ಪೊಲೀಸರು ಗಾಂಜಾ ಕೇಸ್ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3 ಲಕ್ಷದ 40 ಸಾವಿರ ರೂಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. ಮತ್ತೊಂದು ಕಡೆ ಆಲ್ದೂರು ಠಾಣೆ ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದರು ಎನ್ನಲಾಗಿದೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ