February 22, 2026

Newsnap Kannada

The World at your finger tips!

alduru

ಕರ್ತವ್ಯ ಲೋಪ ಆರೋಪ, ಪಿಎಸ್ಐ ಸೇರಿ 8 ಪೊಲೀಸರು ಸಸ್ಪೆಂಡ್

Spread the love

ಕರ್ತವ್ಯ ಲೋಪ ಆರೋಪದಡಿಯಲ್ಲಿ ಓರ್ವ ಪಿಎಸ್ಐ ಸೇರಿದಂತೆ 6 ಜನ ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬುವರನ್ನು ಅಮಾನತು ಮಾಡಲಾಗಿದೆ.

ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿಯೇ ಆಲ್ದೂರು ಠಾಣೆ ಪೊಲೀಸ್ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವರನ್ನು ಅಮಾನತು ಮಾಡಲಾಗಿದೆ. 

ಅಮಾನತುಗೊಂಡ ಬಸವನಹಳ್ಳಿ ಠಾಣೆ ಪೊಲೀಸರು ಗಾಂಜಾ ಕೇಸ್ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3 ಲಕ್ಷದ 40 ಸಾವಿರ ರೂಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. ಮತ್ತೊಂದು ಕಡೆ ಆಲ್ದೂರು ಠಾಣೆ ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದರು ಎನ್ನಲಾಗಿದೆ

error: Content is protected !!